ಇಂದು ಸಂತ ಗುರು ರವಿದಾಸರ ಜಯಂತಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸಂತ ಗುರು ರವಿದಾಸರ ಕುರಿತು ತಮ್ಮ ಚಿಂತನೆಗಳ ವೀಡಿಯೊವನ್ನು ಶ್ರೀ ಮೋದಿ ಅವರು ಹಂಚಿಕೊಂಡಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಅವರು,
“ಪೂಜ್ಯ ಸಂತ ಗುರು ರವಿದಾಸ್ ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಸಮಾಜದಿಂದ ತಾರತಮ್ಯವನ್ನು ತೊಡೆದುಹಾಕಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಸೇವಾ ಮನೋಭಾವ, ಸಾಮರಸ್ಯ ಮತ್ತು ಸಹೋದರತ್ವದಿಂದ ತುಂಬಿದ ಅವರ ಸಂದೇಶಗಳು ಸಮಾಜದ ದುರ್ಬಲ ಮತ್ತು ಅವಕಾಶ ವಂಚಿತ ವರ್ಗಗಳ ಕಲ್ಯಾಣಕ್ಕೆ ಯಾವಾಗಲೂ ಮಾರ್ಗದರ್ಶಕ ಬೆಳಕಾಗಿ ಉಳಿಯುತ್ತವೆ” ಎಂದು ಬರೆದುಕೊಂಡಿದ್ದಾರೆ.
*****
पूज्य संत गुरु रविदास जी को उनकी जन्म-जयंती पर सादर नमन और वंदन। समाज से भेदभाव के उन्मूलन के लिए उन्होंने अपना जीवन समर्पित कर दिया। सेवा, सौहार्द और भाईचारे की भावना से भरे उनके संदेश समाज के कमजोर और वंचित वर्गों के कल्याण के लिए सदैव पथ-प्रदर्शक बने रहेंगे। pic.twitter.com/iP1nGEb2oo
— Narendra Modi (@narendramodi) February 12, 2025