ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆಗಾಗಿ ಆಚಾರ್ಯ ಕೃಪಲಾನಿ ಅವರನ್ನು ಸ್ಮರಿಸಿದ್ದಾರೆ. ಆಚಾರ್ಯ ಕೃಪಲಾನಿ ಅವರ ಜಯಂತಿ ಸಂದರ್ಭದಲ್ಲಿ, ಇಂದು ಪ್ರಧಾನಮಂತ್ರಿಯವರು ನಮ್ಮ ರಾಷ್ಟ್ರದ ಬಗ್ಗೆ ಕೃಪಲಾನಿ ಅವರಿಗಿದ್ದ ಮಹಾನ್ ದೃಷ್ಟಿಕೋನ, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಸಬಲೀಕರಣಕ್ಕೆ ಅವರ ಕೊಡುಗೆಗಳನ್ನು ಶ್ಲಾಘಿಸಿದ್ದಾರೆ.
ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ: “ಬಾಪು ಅವರ ನಾಯಕತ್ವದಲ್ಲಿ ಆಚಾರ್ಯ ಕೃಪಲಾನಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿದರು. ಅವರು ನಮ್ಮ ರಾಷ್ಟ್ರದ ಬಗ್ಗೆ ಉತ್ತಮ ದೂರದೃಷ್ಟಿಯನ್ನು ಹೊಂದಿದ್ದರು ಮತ್ತು ಸಂಸದರಾಗಿ ಅದನ್ನು ಪೂರೈಸಲು ಕೆಲಸ ಮಾಡಿದರು. ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಸಬಲೀಕರಣಕ್ಕೆ ಅವರು ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಅವರ ಜಯಂತಿಯಂದು ಅವರನ್ನು ಸ್ಮರಿಸುತ್ತೇನೆ.”
***
Acharya Kripalani was at the forefront of India’s freedom struggle under Bapu’s leadership. He had a great vision for our nation and worked to fulfil it as MP. He made immense contributions towards environmental protection and social empowerment. Remembering him on his Jayanti.
— Narendra Modi (@narendramodi) November 11, 2021