ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಔಪಚಾರಿಕ ವಲಯದಲ್ಲಿ ಉದ್ಯೋಗಾವಕಾಶಕ್ಕೆ ಉತ್ತೇಜನ ನೀಡಲು ಮತ್ತು ಕೋವಿಡ್ ಚೇತರಿಕೆ ಹಂತದಲ್ಲಿ ಆತ್ಮ ನಿರ್ಭರ ಭಾರತ ಪ್ಯಾಕೇಜ್ 3.0 ಅಡಿಯಲ್ಲಿ ಹೊಸ ಉದ್ಯೋಗ ಸೃಷ್ಟಿಗೆ ಪ್ರೋತ್ಸಾಹ ನೀಡಲು ಆತ್ಮನಿರ್ಭರ ಭಾರತ ರೋಜ್ಗಾರ್ ಯೋಜನೆ (ಎಬಿಆರ್.ವೈ)ಗೆ ತನ್ನ ಅನುಮೋದನೆ ನೀಡಿದೆ.
ಸಂಪುಟವು ಪ್ರಸಕ್ತ ಹಣಕಾಸು ವರ್ಷದಲ್ಲಿ 1,584 ಕೋಟಿ ರೂಪಾಯಿ ಮತ್ತು 2020-23ರ ಇಡಿ ಯೋಜನಾ ಅವಧಿಗೆ 22,810 ಕೋಟಿ ರೂ.ಗಳ ವೆಚ್ಚಕ್ಕೂ ತನ್ನ ಸಮ್ಮತಿ ಸೂಚಿಸಿದೆ.
ಯೋಜನೆಯ ಮುಖ್ಯಾಂಶಗಳು ಈ ಕೆಳಕಂಡಂತಿವೆ:
***