ಉತ್ತರ ಪ್ರದೇಶದ ರಾಜ್ ಕಿಯಾ ವೈದ್ಯಕೀಯ ಕಾಲೇಜಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಅವರು ಖುಷಿನಗರ್ ದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು.
ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಖುಷಿನಗರ್ ವೈದ್ಯಕೀಯ ಕಾಲೇಜಿನಿಂದ ವೈದ್ಯರಾಗುವ ಅಥವಾ ಗುಣಮಟ್ಟದ ವೈದ್ಯಕೀಯ ಮೂಲ ಸೌಕರ್ಯ ಪಡೆಯುವ ಸ್ಥಳೀಯರ ಆಕಾಂಕ್ಷೆ ಈಡೇರಲಿದೆ. ತಮ್ಮದೇ ಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ಪಡೆಯುವ ಸಾಧ್ಯತೆಗಳನ್ನು ರಾಷ್ಟ್ರೀಯ ಶಿಕ್ಷಣ ನೀತಿ ಸಾಕಾರಗೊಳಿಸಲಿದೆ. ಯಾವಾಗ ಮೂಲ ಸೌಕರ್ಯಗಳು ಲಭ್ಯವಿರುತ್ತದೆಯೋ, ಆಗ ದೊಡ್ಡ ಕನಸು ಕಾಣುವ ಧೈರ್ಯ ಮತ್ತು ಆ ಕನಸುಗಳನ್ನು ಈಡೇರಿಸಿಕೊಳ್ಳುವ ಉತ್ಸಾಹ ಹುಟ್ಟುತ್ತದೆ. ಇದರಿಂದ ಸ್ಥಳೀಯ ಯುವ ಸಮೂಹ ತಮ್ಮ ಕನಸುಗಳನ್ನು ಸಾಕಾರಗೊಳಿಸಲು ಸಾಧ್ಯವಾಗಲಿದೆ ಎಂದರು.
ಕೊಳಚೆ ಪ್ರದೇಶದಲ್ಲಿ ವಾಸಿಸುವ, ಸೂರಿಲ್ಲದವರಿಗೆ ಪಕ್ಕಾ ಮನೆಗಳು ದೊರೆತು, ಅದರಲ್ಲಿ ಶೌಚಾಲಯ, ವಿದ್ಯುತ್ ಸಂಪರ್ಕ, ಅಡುಗೆ ಅನಿಲ ಸಂಪರ್ಕ, ಕೊಳಾಯಿಯಿಂದ ನೀರು ಬಂದರೆ ಅಂತಹ ಬಡವರ ವಿಶ್ವಾಸ ವೃದ್ಧಿಯಾಗುತ್ತದೆ. ಡಬಲ್ ಎಂಜಿನ್ ಸರ್ಕಾರ ಡಬಲ್ ಶಕ್ತಿಯೊಂದಿಗೆ ಇಲ್ಲಿನ ಪರಿಸ್ಥಿತಿಯನ್ನು ಸುಧಾರಿಸುತ್ತಿದೆ. ಹಿಂದಿನ ಸರ್ಕಾರಗಳು ಇಲ್ಲಿನ ಬಡವರ ಘನತೆ ಮತ್ತು ಪ್ರಗತಿಯ ಬಗ್ಗೆ ಗಮನಕೊಟ್ಟಿರಲಿಲ್ಲ ಮತ್ತು ರಾಜವಂಶದ ರಾಜಕಾರಣದ ದುಷ್ಪರಿಣಾಮಗಳಿಂದ ಅನೇಕ ಉತ್ತಮ ಕಾರ್ಯಕ್ರಮಗಳು ಬಡವರಲ್ಲಿ ಬಡವರಿಗೆ ತಲುಪದಂತೆ ಮಾಡಿತ್ತು ಎಂದರು.
“ಕರ್ಮವನ್ನು ಸಹಾನುಭೂತಿಯಿಂದ ಸಂಪರ್ಕಿಸಬೇಕು ಮತ್ತು ಅದನ್ನು ಸಂಪೂರ್ಣ ಕರುಣೆಯಿಂದಲೇ ಮಾಡಬೇಕು” ಎಂಬ ರಾಮ್ ಮನೋಹರ್ ಲೋಹಿಯಾ ಹೇಳುತ್ತಿದ್ದ ಮಾತನ್ನು ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಸ್ಮರಿಸಿಕೊಂಡರು. ಆದರೆ ಈ ಹಿಂದೆ ಅಧಿಕಾರದಲ್ಲಿದ್ದವರು ಬಡವರ ನೋವಿನ ಬಗ್ಗೆ ಕಾಳಜಿವಹಿಸಿರಲಿಲ್ಲ. ಹಿಂದಿನ ಸರ್ಕಾರ ಅವರ ಕರ್ಮವನ್ನು ಹಗರಣಗಳೊಂದಿಗೆ ಮತ್ತು ಅಪರಾಧಗಳೊಂದಿಗೆ ಜೋಡಿಸಿಕೊಂಡಿದ್ದರು ಎಂದು ಹೇಳಿದರು.
“ಉತ್ತರ ಪ್ರದೇಶದ ಗ್ರಾಮೀಣ ಭಾಗದಲ್ಲಿ ಸ್ವಾಮಿತ್ವ ಯೋಜನೆ ಭವಿಷ್ಯದಲ್ಲಿ ಸಮೃದ್ಧಿಯ ಹೊಸ ಬಾಗಿಲನ್ನು ತೆರೆಯಲಿದೆ “ ಎಂದು ಕೇಂದ್ರದ ಕಾರ್ಯಕ್ರಮದ ಬಗ್ಗೆ ಪ್ರಸ್ತಾಪಿಸಿದರು. ಪ್ರಧಾನಮಂತ್ರಿ ಸ್ವಾಮಿತ್ವ ಯೋಜನೆಯಡಿ ಹಳ್ಳಿಗಳ ಜನರ ಮನೆಗಳಿಗೆ ಮಾಲೀಕತ್ವದ ದಾಖಲೆಗಳನ್ನು ಒದಗಿಸುತ್ತದೆ. ಉಜ್ವಲ ಮತ್ತು ಶೌಚಾಲಯದಂತಹ ಸೌಲಭ್ಯಗಳಿಂದ ಹೆಣ್ಣುಮಕ್ಕಳು ಸುರಕ್ಷತೆ ಮತ್ತು ಘನತೆಯನ್ನು ಅನುಭವಿಸುತ್ತಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಹೆಚ್ಚಿನ ಮನೆಗಳು ಮನೆಯ ಮಹಿಳೆಯರ ಹೆಸರಿನಲ್ಲಿವೆ ಎಂದು ಹೇಳಿದರು.
ಈ ಹಿಂದಿನ ಉತ್ತರ ಪ್ರದೇಶದಲ್ಲಿನ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಪ್ರಧಾನಮಂತ್ರಿ ಅವರು, 2017 ಕ್ಕೂ ಮುನ್ನ ಮಾಫೀಯಾಗಳಿಗೆ ಮುಕ್ತ ಲೂಟಿಗೆ ಮುಕ್ತ ಹಸ್ತವನ್ನು ಸರ್ಕಾರ ಒದಗಿಸಿತ್ತು. ಇಂದು ಯೋಗಿಜಿ ಅವರ ಆಡಳಿತದಲ್ಲಿ ಮಾಫೀಯಾ ಕ್ಷಮೆಯಾಚಿಸುತ್ತಾ ಓಡುತ್ತಿದೆ ಮತ್ತು ಯೋಗಿಜಿ ಸರ್ಕಾರದಲ್ಲಿ ಮಾಫೀಯಾಗಳು ಹೆಚ್ಚು ತೊಂದರೆ ಎದುರಿಸುತ್ತಿವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.
“ಉತ್ತರ ಪ್ರದೇಶ ಗರಿಷ್ಠ ಸಂಖ್ಯೆಯ ಪ್ರಧಾನಮಂತ್ರಿಗಳನ್ನು ರಾಜ್ಯಕ್ಕೆ ನೀಡಿದೆ. ಇದು ಉತ್ತರ ಪ್ರದೇಶದ ವಿಶೇಷತೆ, ಆದಾಗ್ಯೂ ಉತ್ತರ ಪ್ರದೇಶದ ಗುರುತನ್ನು ಇದಕ್ಕಾಗಿಯೇ ಸೀಮಿತಗೊಳಿಸಲಾಗದು, ಉತ್ತರ ಪ್ರದೇಶವನ್ನು 6-7 ದಶಕಗಳಿಗೆ ಸೀಮಿತಗೊಳಿಸಲಾಗದು. ಇದರ ಇತಿಹಾಸ ಕಾಲಾತೀತ, ಈ ರಾಜ್ಯದ ಕೊಡುಗೆಯೂ ಕಾಲಾತೀತ”’. ಇಲ್ಲಿ ಶ್ರೀರಾಮ ಅವತರಿಸಿದ, ಭಗವಾನ್ ಶ್ರೀಕೃಷ್ಣನ ಅವತಾರವೂ ಸಹ ಇಲ್ಲಿಯೇ ಆಗಿದೆ. 24 ಜೈನ ತೀರ್ಥಂಕರರಲ್ಲಿ 18 ತೀರ್ಥಂಕರರು ಉತ್ತರ ಪ್ರದೇಶದವರು. ಮಧ್ಯಕಾಲೀನ ಯುಗದಲ್ಲಿ ತುಳಸೀದಾಸರು ಮತ್ತು ಕಬೀರದಾಸರಂತಹ ಯುಗ ಪುರುಷರು ಸಹ ಈ ಮಣ್ಣಿನಲ್ಲಿ ಜನಿಸಿದವರು. ಸಂತ ರವಿದಾಸ್ ಅವರಂತಹ ಸಮಾಜ ಸುಧಾರಕರಿಗೆ ಜನ್ಮ ನೀಡಿದ ಶ್ರೇಷ್ಠತೆಯೂ ಈ ಭೂಮಿಗೆ ಸಲ್ಲುತ್ತದೆ ಎಂದು ಹೇಳಿದರು.
ಉತ್ತರ ಪ್ರದೇಶ ಪ್ರತಿ ಹೆಜ್ಜೆಯಲ್ಲೂ ಯಾತ್ರಾಸ್ಥಳಗಳನ್ನು ಹೊಂದಿರುವ ಪ್ರದೇಶವಾಗಿದೆ ಮತ್ತು ಇಲ್ಲಿನ ಪ್ರತಿ ಕಣದಲ್ಲೂ ಶಕ್ತಿಯಿದೆ. ಇಲ್ಲಿನ ನಿಮಿಷ್ಯಾರಣ್ಯದಲ್ಲಿ ವೇದಗಳು ಮತ್ತು ಪುರಾಣಗಳನ್ನು ಬರೆಯುವ ಕೆಲಸವಾಗಿದೆ ಮತ್ತು ಅವಧ್ ಪ್ರದೇಶವಾದ ಇಲ್ಲಿ ಅಯೋಧ್ಯೆಯಂತಹ ಯಾತ್ರಾ ಸ್ಥಳವೂ ಸಹ ಇದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.
ಉತ್ತರ ಪ್ರದೇಶದಲ್ಲಿ ನಮ್ಮ ಭವ್ಯ ಸಿಖ್ ಗುರು ಸಂಪ್ರದಾಯ ಆಳವಾದ ಸಂಪರ್ಕವನ್ನು ಹೊಂದಿದೆ. ಆಗ್ರಾದಲ್ಲಿರುವ ಗುರು ಕಾ ತಾಲ್ ಗುರುದ್ವಾರ ಗುರು ತೇಜ್ ಬಹಾದ್ದೂರ್ ಜಿ ಅವರ ವೈಭವಕ್ಕೆ ಸಾಕ್ಷಿಯಾಗಿದೆ. ಇಲ್ಲಿ ಅವರು ಔರಂಗಜೇಬ್ ಗೆ ಸವಾಲು ಹಾಕಿದ್ದರು.
ಡಬಲ್ ಎಂಜಿನ್ ಸರ್ಕಾರ ರೈತರ ಉತ್ಪನ್ನಗಳನ್ನು ಖರೀದಿಸುವಲ್ಲಿಯೂ ಹೊಸ ದಾಖಲೆ ಬರೆದಿದೆ. ರೈತರು ಉತ್ಪಾದಿಸಿದ ಉತ್ಪನ್ನಗಳನ್ನು ಖರೀದಿಸಿರುವ ಪ್ರಮಾಣ ಸುಮಾರು 80 ಸಾವಿರ ಕೋಟಿ ರೂಪಾಯಿಗೆ ತಲುಪಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಕಾರ್ಯಕ್ರಮದಡಿ ಉತ್ತರ ಪ್ರದೇಶ ರೈತರ ಬ್ಯಾಂಕ್ ಖಾತೆಗಳಿಗೆ ಸುಮಾರು 37,000 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.
***
Addressing a public meeting in the sacred land of Kushinagar. https://t.co/RNTaHrekuH
— Narendra Modi (@narendramodi) October 20, 2021
जब मूल सुविधाएं मिलती हैं, तो बड़े सपने देखने का हौसला और सपनों को पूरा करने का जज्बा पैदा होता है।
— PMO India (@PMOIndia) October 20, 2021
जो बेघर है, झुग्गी में है, जब उसको पक्का घर मिले, जब घर में शौचालय हो, बिजली का कनेक्शन हो, गैस का कनेक्शन हो, नल से जल आए, तो गरीब का आत्मविश्वास और बढ़ जाता है: PM
डबल इंजन की सरकार, डबल ताकत से स्थितियों को सुधार रही है।
— PMO India (@PMOIndia) October 20, 2021
वर्ना 2017 से पहले जो सरकार यहां थी, उसे आपकी दिक्कतों से, गरीब की परेशानी से कोई सरोकार नहीं था: PM @narendramodi
लोहिया जी कहा करते थे कि - कर्म को करूणा से जोड़ो, भरपूर करुणा से जोड़ो।
— PMO India (@PMOIndia) October 20, 2021
लेकिन जो पहले सरकार चला रहे थे, उन्होंने गरीब के दर्द की परवाह नहीं की, पहले की सरकार ने अपने कर्म को, घोटालों से जोड़ा, अपराधों से जोड़ा: PM @narendramodi
केंद्र सरकार ने एक और योजना शुरू की है जो भविष्य में उत्तर प्रदेश के ग्रामीण इलाकों में समृद्धि का नया द्वार खोलने वाली है।
— PMO India (@PMOIndia) October 20, 2021
इस योजना का नाम है- पीएम स्वामित्व योजना।
इसके तहत गांव के घरों की घरौनी यानि घरों का मालिकाना दस्तावेज़ देने का काम शुरु किया है: PM @narendramodi
2017 से पहले जो सरकार यहां पर थी, उसकी नीति थी- माफिया को खुली छूट, खुली लूट।
— PMO India (@PMOIndia) October 20, 2021
आज योगी जी के नेतृत्व में यहां माफिया माफी मांगता फिर रहा है और सबसे ज्यादा दर्द भी माफियावादियों को हो रहा है: PM @narendramodi
उत्तर प्रदेश के बारे में एक बात हमेशा कही जाती है कि ये एक ऐसा प्रदेश है जिसने देश को सबसे ज्यादा प्रधानमंत्री दिये।
— PMO India (@PMOIndia) October 20, 2021
ये यूपी की खूबी है, लेकिन यूपी की पहचान को केवल इस दायरे में ही नहीं देखा जा सकता।
यूपी को 6-7 दशकों तक ही सीमित नहीं रखा जा सकता: PM @narendramodi
ये ऐसी धरती है जिसका इतिहास कालातीत है, जिसका योगदान कालातीत है।
— PMO India (@PMOIndia) October 20, 2021
इस भूमि पर मर्यादापुरुष भगवान राम ने अवतार लिया, भगवान श्रीकृष्ण ने अवतार लिया।
जैन धर्म के 24 में 18 तीर्थंकर, उत्तर प्रदेश में ही अवतरित हुए थे: PM @narendramodi
आप मध्यकाल को देखें तो तुलसीदास और कबीरदास जैसे युगनायकों ने भी इसी मिट्टी में जन्म लिया था।
— PMO India (@PMOIndia) October 20, 2021
संत रविदास जैसे समाजसुधारक को जन्म देने का सौभाग्य भी इसी प्रदेश को मिला है: PM @narendramodi
उत्तर प्रदेश एक ऐसा प्रदेश है जहां पग-पग पर तीर्थ हैं, और कण-कण में ऊर्जा है।
— PMO India (@PMOIndia) October 20, 2021
वेदों और पुराणों को कलमबद्ध करने का काम यहाँ के नैमिषारण्य में हुआ था।
अवध क्षेत्र में ही, यहाँ अयोध्या जैसा तीर्थ है: PM @narendramodi
हमारी गौरवशाली सिख गुरु परंपरा का भी उत्तर प्रदेश से गहरा जुड़ाव रहा है।
— PMO India (@PMOIndia) October 20, 2021
आगरा में ‘गुरु का ताल’ गुरुद्वारा आज भी गुरु तेगबहादुर जी की महिमा का, उनके शौर्य का गवाह है जहां पर उन्होंने औरंगजेब को चुनौती दी थी: PM @narendramodi
डबल इंजन की सरकार यहां किसानों से खरीद के नए रिकॉर्ड स्थापित कर रही है।
— PMO India (@PMOIndia) October 20, 2021
UP के किसानों के ही बैंक अकाउंट में अभी तक लगभग 80,000 करोड़ रुपए उपज की खरीद के पहुंच चुके हैं।
पीएम किसान सम्मान निधि से UP के किसानों के बैंक खाते में 37,000 करोड़ रुपए से अधिक राशि जमा की जा चुकी है: PM