ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. “ಈ ಹುತಾತ್ಮರ ಅದಮ್ಯ ಮನೋಭಾವವನ್ನು ಮುಂದಿನ ಪೀಳಿಗೆಗಳು ಸದಾ ಸ್ಮರಿಸುತ್ತವೆ” ಎಂದು ಪ್ರಧಾನಮಂತ್ರಿಯವರು ಹೇಳಿದರು.
ಎಕ್ಸ್ ತಾಣದ ತಮ್ಮ ಖಾತೆಯಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಸಂದೇಶವನ್ನು ಹಂಚಿಕೊಂಡಿದ್ದಾರೆ:
“ನಾವು ಇಂದು ಜಲಿಯನ್ ವಾಲಾಬಾಗ್ ನ ಹುತಾತ್ಮರಿಗೆ ಗೌರವ ಸಲ್ಲಿಸುತ್ತೇವೆ. ಮುಂಬರುವ ಪೀಳಿಗೆಗಳು ಅವರ ಅದಮ್ಯ ಮನೋಭಾವವನ್ನು ಯಾವಾಗಲೂ ನೆನಪಿಸಿಕೊಳ್ಳುತ್ತವೆ. ಇದು ನಿಜಕ್ಕೂ ನಮ್ಮ ರಾಷ್ಟ್ರದ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವಾಗಿದೆ. ಈ ಹುತಾತ್ಮರ ತ್ಯಾಗ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ತಿರುವು ನೀಡಿತ್ತು.”
*****
We pay homage to the martyrs of Jallianwala Bagh. The coming generations will always remember their indomitable spirit. It was indeed a dark chapter in our nation’s history. Their sacrifice became a major turning point in India’s freedom struggle.
— Narendra Modi (@narendramodi) April 13, 2025