Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಶ್ರೀಲಂಕಾದ ಭಾರತೀಯ ಮೂಲದ ತಮಿಳು ನಾಯಕರು 


ಶ್ರೀಲಂಕಾದಲ್ಲಿರುವ ಭಾರತೀಯ ಮೂಲದ ತಮಿಳು (IOT) ನಾಯಕರು ಇಂದು ರಾಜಧಾನಿ ಕೊಲಂಬೊದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು. ಶ್ರೀಲಂಕಾ ಸರ್ಕಾರದ ಸಹಕಾರದೊಂದಿಗೆ 10,000 ಮನೆಗಳು, ಆರೋಗ್ಯ ಸೌಲಭ್ಯಗಳು, ಪವಿತ್ರ ಸ್ಥಳ ಸೀತಾ ಎಲಿಯಾ ದೇವಾಲಯ ಭಾರತೀಯ ಮೂಲದ ತಮಿಳರ ಅಭಿವೃದ್ಧಿ ಯೋಜನೆಗಳ ನಿರ್ಮಾಣಕ್ಕೆ ಭಾರತ ಸರ್ಕಾರ ಬೆಂಬಲ ನೀಡಲಿದೆ ಎಂದು ಎಂದು ಶ್ರೀ ಮೋದಿಯವರು ಘೋಷಿಸಿದರು. 

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು,

”ಭಾರತೀಯ ಮೂಲದ ತಮಿಳು (IOT) ನಾಯಕರೊಂದಿಗೆ ನಡೆಸಿದ ಸಭೆ ಫಲಪ್ರದವಾಗಿತ್ತು. ಸಮುದಾಯವು 200 ವರ್ಷಗಳಿಗೂ ಹೆಚ್ಚು ಕಾಲದಿಂದ ಎರಡು ದೇಶಗಳ ನಡುವೆ ಜೀವಂತ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಶ್ರೀಲಂಕಾ ಸರ್ಕಾರದ ಸಹಕಾರದೊಂದಿಗೆ 10,000 ಮನೆಗಳು, ಆರೋಗ್ಯ ಸೌಲಭ್ಯಗಳು, ಪವಿತ್ರ ಸ್ಥಳ ಸೀತಾ ಎಲಿಯಾ ದೇವಾಲಯ ಮತ್ತು ಭಾರತೀಯ ಮೂಲದ ತಮಿಳು ಸಮುದಾಯದವರಿಗೆ ಇತರ ಸಮುದಾಯ ಅಭಿವೃದ್ಧಿ ಯೋಜನೆಗಳ ನಿರ್ಮಾಣಕ್ಕೆ ಭಾರತ ಸರ್ಕಾರ ಬೆಂಬಲ ನೀಡುತ್ತದೆ.” ಎಂದು ತಿಳಿಸಿದ್ದಾರೆ.

“இந்தியாவை பூர்வீகமாக கொண்ட தமிழ் மக்களுடன் சுமூகமான சந்திப்பு இடம்பெற்றிருந்தது. இச்சமூகத்தினர் 200 ஆண்டுகளுக்கும் மேலாக இரு நாடுகளுக்குமான ஒரு வாழும் உறவுப் பாலமாக திகழ்கின்றனர். இலங்கை அரசாங்கத்துடனான ஒத்துழைப்புடன் இந்தியாவை பூர்வீகமாக கொண்ட தமிழ் மக்களுக்காக 10000 வீடுகள், சுகாதார வசதிகள், புனித சீதை அம்மன் ஆலயம் ஆகியவற்றின் நிர்மாணம் மற்றும் ஏனைய சமூக அபிவிருத்தி திட்டங்களுக்காக இந்தியா ஆதரவு வழங்கும்.”

*****