ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಂತ ಕವಿ ಶ್ರೀ ಕನಕದಾಸ ಮತ್ತು ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದರು.
ಶ್ರೀ ಕನಕದಾಸರಿಗೆ ಗೌರವನಮನ ಸಲ್ಲಿಸಿದ ನಂತರ ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ: “ಇಂದು ಕನಕದಾಸ ಜಯಂತಿಯ ಶುಭ ಸಂದರ್ಭದಲ್ಲಿ ನಾನು ಬೆಂಗಳೂರಿನಲ್ಲಿ ಶ್ರೀ ಕನಕದಾಸರಿಗೆ ನಮನ ಸಲ್ಲಿಸಿದ್ದೇನೆ. ಭಕ್ತಿಯ ಮಾರ್ಗವನ್ನು ತೋರಿಸಿ, ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿ, ಸಾಮಾಜಿಕ ಏಕತೆಯ ಸಂದೇಶವನ್ನು ಸಾರಿದ ಅವರಿಗೆ ನಾವು ಸದಾ ಚಿರಋಣಿಗಳಾಗಿರುತ್ತೇವೆ.”
ಪ್ರಧಾನಮಂತ್ರಿ, ಮಹರ್ಷಿ ವಾಲ್ಮೀಕಿಗೆ ಗೌರವನಮನ ಸಲ್ಲಿಸುವ ಕುರಿತು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಮತ್ತು ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತ್ತಿತರರು ಉಪಸ್ಥಿತರಿದ್ದರು.
******
Paid tributes to Maharshi Valmiki Ji in Bengaluru today morning. pic.twitter.com/CreEfRB8Tb
— Narendra Modi (@narendramodi) November 11, 2022
ಇಂದು ಬೆಳಗ್ಗೆ ಮಹರ್ಷಿ ವಾಲ್ಮಿಕಿಯವರಿಗೆ ಗೌರವ ನಮನ ಸಲ್ಲಿಸಿದೆ. pic.twitter.com/FPjvVmxIlZ
— Narendra Modi (@narendramodi) November 11, 2022
Today, on the auspicious occasion of Kanaka Dasa Jayanti, I paid homage to Sri Kanaka Dasa in Bengaluru. We will always be grateful to him for showing us the path of Bhakti, enriching Kannada literature and giving us a message of social unity. pic.twitter.com/dp51vT6Z9K
— Narendra Modi (@narendramodi) November 11, 2022
ಇಂದು ಕನಕದಾಸರ ಜಯಂತಿಯ ಶುಭ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಶ್ರೀ ಕನಕದಾಸರಿಗೆ ಗೌರವ ನಮನ ಸಲ್ಲಿಸಿದೆ. ಭಕ್ತಿಯ ಮಾರ್ಗವನ್ನು ತೋರಿಸಿ, ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿ, ಸಾಮಾಜಿಕ ಏಕತೆಯ ಸಂದೇಶವನ್ನು ಸಾರಿದ ಸಂತ ಕನಕದಾಸರಿಗೆ ನಾವು ಸದಾ ಚಿರಋಣಿಗಳಾಗಿರುತ್ತೇವೆ. pic.twitter.com/sEdGT5qGoD
— Narendra Modi (@narendramodi) November 11, 2022