ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ನಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಭೂಕಂಪಗಳ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ವಿಪತ್ತಿನಿಂದ ಸಂಕಷ್ಟಕ್ಕೊಳಗಾದವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಅವರು ಮನಃಪೂರ್ವಕವಾಗಿ ಪ್ರಾರ್ಥಿಸಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ನ ಸರ್ಕಾರ ಮತ್ತು ಜನರಿಗೆ ಸಾಧ್ಯವಿರುವ ಎಲ್ಲ ನೆರವನ್ನು ಒದಗಿಸಲು ಭಾರತ ಸಿದ್ಧವಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಎಕ್ಸ್ ಪೋಸ್ಟ್ನಲ್ಲಿ ಅವರು ಹೀಗೆ ಬರೆದಿದ್ದಾರೆ:
“ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ನಲ್ಲಿ ಭೂಕಂಪದ ಪರಿಸ್ಥಿತಿಯ ಕಳವಳಕಾರಿಯಾಗಿದೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಭಾರತವು ಎಲ್ಲಾ ಸಾಧ್ಯ ನೆರವು ನೀಡಲು ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರಾಧಿಕಾರಗಳು ಸಹಕರಿಸುವಂತೆ ಕೋರಲಾಗಿದೆ. ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿರುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸೂಚಿಸಲಾಗಿದೆ.”
*****
Concerned by the situation in the wake of the Earthquake in Myanmar and Thailand. Praying for the safety and wellbeing of everyone. India stands ready to offer all possible assistance. In this regard, asked our authorities to be on standby. Also asked the MEA to remain in touch…
— Narendra Modi (@narendramodi) March 28, 2025