Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಶ್ವ ಜಲ ದಿನದಂದು ಜಲ ಸಂರಕ್ಷಣೆಯ ಬದ್ಧತೆಯನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಜಲ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಮಾನವ ನಾಗರಿಕತೆಯಲ್ಲಿ ನೀರಿನ ಮಹತ್ವದ ಪಾತ್ರವನ್ನು ಒತ್ತಿ ಹೇಳಿರುವ ಅವರು, ಭವಿಷ್ಯದ ಪೀಳಿಗೆಗೆ ಈ ಅತ್ಯಮೂಲ್ಯ ಸಂಪನ್ಮೂಲವನ್ನು ರಕ್ಷಿಸಲು ಸಾಮೂಹಿಕ ಕ್ರಮವನ್ನು ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

ಶ್ರೀ ಮೋದಿಯವರು Xನಲ್ಲಿ;

“ವಿಶ್ವ ಜಲ ದಿನವಾದ ಇಂದು, ನೀರನ್ನು ಸಂರಕ್ಷಿಸುವ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ. ನೀರು ನಾಗರಿಕತೆಗಳ ಜೀವನಾಡಿಯಾಗಿದ್ದು, ಭವಿಷ್ಯದ ಪೀಳಿಗೆಗಾಗಿ ಅದನ್ನು ರಕ್ಷಿಸುವುದು ಬಹಳ ಮುಖ್ಯ” ಎಂದಿದ್ದಾರೆ.

 

 

*****